ಬುಳೇರಿಮೊಗ್ರು ಶಾಲೆಗೆ ಕಡಮಜಲು ಸುಭಾಸ್ ರೈವರಿಂದ ಧ್ವನಿವರ್ಧಕ ಕೊಡುಗೆ

0

ಪುತ್ತೂರು: ಬೆಳ್ತಂಗಡಿ ತಾಲೂಕಿನ ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ದೇಶಭಕ್ತ ಎನ್.ಎಸ್. ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಸ್ ರೈರವರು ಧ್ವನಿವರ್ಧಕವನ್ನು ಕೊಡುಗೆಯಾಗಿ ಇತ್ತೀಚೆಗೆ ನೀಡಿದರು.

ಶಾಲಾ ಪೋಷಕರ ಸಭೆಯಲ್ಲಿ ಈ ಬಗ್ಗೆ ಸುಭಾಸ್ ರೈಯವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಕರುಣಾಕರ ಎಚ್.ಎಸ್. ಹಾಗೂ ಶಿಕ್ಷಕ ವೃಂದ, ಶಿಕ್ಷಕ- ರಕ್ಷಕ ಸಂಘ ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here