ಸವಣೂರು ಯುವಕ ಮಂಡಲದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನ 

0

ಸವಣೂರು : ದೇಶದ ಏಕತೆ ಸಂಕೇತವಾಗಿ ‘ನನ್ನ ಮಣ್ಣು ನನ್ನ ದೇಶದ ಅಭಿಯಾನ’ ಅಡಿಯಲ್ಲಿ ದೇಶಾದ್ಯಂತ ಮೃತ್ತಿಕೆ ಸಂಗ್ರಹಿಸಿ ಅಮೃತ ಉದ್ಯಾನ ನಿರ್ಮಾಣ ಮಾಡಲಾಗುವ ಕಾರ್ಯಕ್ಕೆ ಸವಣೂರು ಯುವಕ ಮಂಡಲದ ಆವರಣದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ,ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು , ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು, ಸದಸ್ಯ ವೇಣುಗೋಪಾಲ ಕಳುವಾಜೆ , ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕಿ ಹರ್ಷ ಕುಮಾರಿ ಹಾಗೂ ಸೇವಾ ಪ್ರತಿನಿಧಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here