![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣಾ ಶಿಬಿರ, ಉಚಿತ ಮಧುಮೇಹ(GRBS), HBA1C ಮತ್ತು ನ್ಯೂರೋಪತಿ ತಪಾಸಣೆಯು ಅ.9 ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್ನಲ್ಲಿರುವ ಡಾ|ನಝೀರ್ ಅಹಮ್ಮದ್ರವರ ಕ್ಲಿನಿಕ್ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.
ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಶಿಬಿರದಲ್ಲಿ ಪಾಲ್ಗೊಂಡು ಡಾ.ನಝೀರ್ ಅಹಮದ್ ರವರಲ್ಲಿ ಸಲಹೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ಪುತ್ತೂರು ವರ್ತಕ ಸಂಘದ ಕಾರ್ಯದರ್ಶಿ ಮನೋಜ್, ಸಂಧ್ಯಾ ಮನೋಜ್ ಉಪಸ್ಥಿತರಿದ್ದರು. ಮೆಕ್ಲಾಯಿಡ್ ಕಂಪೆನಿಯ ವೀರೇಂದ್ರ, ಎಮ್ಯುಕ್ಯೂರ್ ಕಂಪೆನಿಯ ತೌಸಿಫ್, ಟೊರಂಟ್ ಕಂಪೆನಿಯ ಮಂಜು ಅಗಿಲಸ್ ಲ್ಯಾಬ್ ಸಿಬ್ಬಂದಿ, ಎಸ್.ಆರ್.ಎಲ್ ಲ್ಯಾಬ್, ಡಾ.ನಝೀರ್ ಅಹಮದ್ ಡಯಾಬೆಟ್ಸ್ ಸೆಂಟರ್ ನ ಸಿಬ್ಬಂದಿ ಸಹಕರಿಸಿದರು.
ಪಾಲ್ಗೊಂಡ ಫಲಾನುಭವಿಗಳು..
ಥೈರಾಯಿಡ್ ಪರೀಕ್ಷೆ-45 ಮಂದಿ
HBA1C-26 ಮಂದಿ
ಮಧುಮೇಹ-30 ಮಂದಿ
ನ್ಯೂರೋಪತಿ ಪರೀಕ್ಷೆ-15 ಮಂದಿ