ವಿದ್ಯಾಭಾರತಿ ಕ್ರೀಡಾಕೂಟ: ನಡಿಗೆ ಸ್ಪರ್ಧೆಯಲ್ಲಿ ರಾಮಕುಂಜ ಆ.ಮಾ.ಶಾಲೆಯ ವಿಲಾಸ್ ಗೌಡಗೆ ಚಿನ್ನದ ಪದಕ

0

ರಾಮಕುಂಜ: ಹೈದರಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮಟ್ಟದ ಕ್ರೀಡಾಕೂಟದ ನಡಿಗೆ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರತಿನಿಧಿಸಿದ 9ನೇ ತರಗತಿಯ ವಿದ್ಯಾರ್ಥಿ ವಿಲಾಸ್ ಗೌಡ ಪಿ.ಅವರು ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡು, ಬಿಹಾರದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿಯವರು ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here