ಪುತ್ತೂರು ಶಾರದೋತ್ಸವ: ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ

0

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ 89 ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ನಡೆಯುವ ಪುತ್ತೂರು ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ವಿತರಣೆ ವಿತರಿಸುವ ಕಾರ್ಯಕ್ರಮ ಅ.12 ರಂದು ಪುತ್ತೂರು ಶಾರದೋತ್ಸವ ಸ್ವಾಗತ ಸಮಿತಿ ನೇತೃತ್ವದಲ್ಲಿ ನಡೆಯಿತು.


ಬೆಳಿಗ್ಗೆ ದರ್ಬೆಯಿಂದ ಆಮಂತ್ರಣ ಪತ್ರ ವಿತರಣೆ ಕಾರ್ಯಕ್ರಮಕ್ಕೆ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಉಷಾ ಮೆಡಿಕಲ್ ಮಾಲಕರಿಗೆ ಆಮಂತ್ರಣ ಪತ್ರ ನೀಡುವ ಮೂಲಕ ಚಾಲನೆ ನೀಡಿದರು.


ಸ್ವಾಗತ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಶೋಭಾಯಾತ್ರೆಯ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಸಂಚಾಲಕ ಪಿ ಜಿ ಜಗನ್ನಿವಾಸ ರಾವ್, ಶಾರದಾ ಭಜನಾ ಮಂದಿರದ ಅಧ್ಯಕ್ಷ ಸಾಯಿ ರಾಮ್, ಜಯಂತ ಉರ್ಲಾಂಡಿ, ದಯಾನಂದ, ನವೀನ್ ಕುಲಾಲ್, ಹೆಚ್ ಉದಯ, ದಿನೇಶ್ ಪಂಜಿಗ, ಅಜಿತ್ ರೈ ಹೊಸಮನೆ, ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ, ಟೈಲರ್ಸ್ ಅಸೋಸಿಯೇಶನ್ ಪದಾಧಿಕಾರಿಗಳು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here