ದಾಸಕೋಡಿ: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

0

ವಿಟ್ಲ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವರು ಮೃತಪಟ್ಟ ಘಟನೆ ಅ.12ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿರವರ ಪುತ್ರಿ ಪಾವನ ( 23 ವ.) ಮೃತ ದುರ್ದೈವಿ ಯುವತಿ.
ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪಾವನ ಸಂಜೆ ವೇಳೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ಮೂಲಕ ಮನೆ ಕಡೆ ಹೊರಟಿದ್ದರು. ದಾಸಕೋಡಿ ಎಂಬಲ್ಲಿ ಬಸ್ಸ್‌ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಆ ದಾರಿಯಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾವನರವರು ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಕೂಡ ಪಲ್ಟಿಯಾಗಿದೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಸಂಚಾರಿ ಠಾಣಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here