ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ರಥ ಸಮರ್ಪಣೆ ಕುರಿತು ಪ್ರಶ್ನಾ ಚಿಂತನೆ

0

ಬೆಳ್ಳಾರೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀಜಲದುರ್ಗಾದೇವಿಗೆ ರಥ ಸಮರ್ಪಣೆ ಅಂಗವಾಗಿ ಪ್ರಶ್ನಾ ಚಿಂತನೆಯು ಅ.13 ರಂದು ಬೆಳಿಗ್ಗೆ ಆರಂಭವಾಯಿತು.ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಶಿಲ್ಪಿಗಳಾದ ಮಹೇಶ ಮುನಿಯಂಗಳ ಅವರ ಉಪಸ್ಥಿತಿಯಲ್ಲಿ ಶ್ರೀಧರನ್ ಪೆರುಂಬಾಳ ಇವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ಆರಂಭವಾಗಿದೆ.

ಮುಂದಿನ ನವಂಬರ್ ತಿಂಗಳಲ್ಲಿ ಶ್ರೀ ದೇವಿಗೆ ರಥ ಸಮರ್ಪಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳ ಸಭೆಯಲ್ಲಿ ಸಂಕಲ್ಪಿಸಿದಂತೆ ,ರಥ ಸಮರ್ಪಣೆಯ ಬಗ್ಗೆ ಪ್ರಶ್ನಾಚಿಂತನೆ ನಡೆಸಲಾಗಿದೆ.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸಮಿತಿ ಸದಸ್ಯರು ,ಮಾಜಿ ಅಧ್ಯಕ್ಷರು ,ಮಾಜಿ ಸದಸ್ಯರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here