ಸುರತ್ಕಲ್ ಎಂಆರ್‌ಪಿಎಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ: ಬೆಂಬಲ ಸೂಚಿಸಿ ತಾನು ಸ್ವತಃ ಪ್ರತಿಭಟನೆಯಲ್ಲಿ ಭಾಗವಹಿಸಿದ ಪುತ್ತಿಲ

0

ಪುತ್ತೂರು: ಸುರತ್ಕಲ್ ಓಎಂಪಿಎಲ್ ಕಂಪೆನಿಯು ಎಂಆರ್‌ಪಿಎಲ್ ಜೊತೆಗೆ ವಿಲೀನಗೊಂಡು ಕಾರ್ಮಿಕರಿಗೆ ವೇತನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಎಂಆರ್‌ಪಿಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ಕಾನ ಬಳಿ ಅಹೋರಾತ್ರಿ ನಡೆಯುತ್ತಿರುವ ಪ್ರತಿಭಟನೆಗೆ ಪುತ್ತಿಲ ಪರಿವಾರ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂಆರ್‌ಪಿಎಲ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.

ವೇತನ ತಾರತಮ್ಯ ಮಾಡದೇ ಏಕರೂಪ ವೇತನ ಜಾರಿಗೊಳಿಸಬೇಕೆಂಬ ಪ್ರತಿಭಟನೆ ಕಾರರ ಬೇಡಿಕೆಯನ್ನು ಅರುಣ್ ಕುಮಾರ್ ಪುತ್ತಿಲ ಅವರು ಎಂಆರ್‌ಪಿಎಲ್ ಅಧಿಕಾರಿಗಳ ಮುಂದಿಟ್ಟರು.

ಇಲ್ಲವಾದಲ್ಲಿ ಕಾರ್ಮಿಕರೊಂದಿಗೆ ಇನ್ನಷ್ಟು ಉಗ್ರ ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರ ಪೂರ್ಣ ರೀತಿಯಲ್ಲಿ ಭಾಗವಹಿಸಲಿದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭ ಪ್ರತಿಭಟನೆ ನೇತೃತ್ವ ವಹಿಸಿದ ಯೂನಿಯನ್‌ನ ಅಧ್ಯಕ್ಷ ಸುಧೀರ್ ಕುಮಾರ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here