ಬೆಟ್ಟಂಪಾಡಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಇರ್ದೆಯಲ್ಲಿ ಶ್ರಮದಾನ

0

ಇರ್ದೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಪಂಪಾಡಿ ಇಲ್ಲಿನ ಎನ್ಎಸ್ಎಸ್ ಘಟಕಗಳ ವತಿಯಿಂದ ಇತಿಹಾಸ ಪ್ರಸಿದ್ಧ ಬೆಂದ್ರ್ ತೀರ್ಥ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇರ್ದೆ ಇಲ್ಲಿ ಒಂದು ದಿನದ ಶ್ರಮದಾನ ನಡೆಯಿತು. ಶ್ರೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಭಟ್ ಘಾಟೆ ಇವರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆಯಿತ್ತು, ಶುಭಹಾರೈಸಿದರು. ವಿಷ್ಣುಮೂರ್ತಿ ದೇವಾಲಯದ ಶಾರದೋತ್ಸವ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಬೈರಮಜಲು, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ರೈ ಬೈಲಾಡಿ, ಶಿವಾಜಿ ಫ್ರೆಂಡ್ಸ್ ಇರ್ದೆ ಇದರ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಯೋಜನಾಧಿಕಾರಿಗಳಾದ ಡಾ. ಯೋಗೀಶ್ ಎಲ್ ಏನ್ ಹಾಗೂ ಡಾ.ಲಾಯ್ಡ್ ವಿಕ್ಕಿ ಡಿಸೋಜಾ ಇವರ ಮಾರ್ಗದರ್ಶನದಲ್ಲಿ ಎನ್ಎಸ್ಎಸ್ ಸ್ವಯಂಸೇವಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ದೇವಾಲಯದ ವತಿಯಿಂದ ಉಪಹಾರ ಭೋಜನದ ವ್ಯವಸ್ಥೆಯನ್ನು ನೀಡಿ ಸಹಕರಿಸಿದರು.

LEAVE A REPLY

Please enter your comment!
Please enter your name here