ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಾಲಯದಲ್ಲಿ ವಿಜೃಂಬಣೆಯ ನವರಾತ್ರಿ ಉತ್ಸವ ಸಂಪನ್ನ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಅ.15 ರಿಂದ ಮೊದಲ್ಗೊಂಡು ಅ. 24ರವರೆಗೆ ನವರಾತ್ರಿ ಉತ್ಸವವು ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಮೊದಲನೆ ದಿನ ಶ್ರೀ ಮಹಾಗಣಪತಿ ಹವನ ನಂತರ ಶ್ರೀ ದೇವರಿಗೆ ಪಂಚವಿಂಶತಿ ಕಲಶ ನಡೆದು ಖ್ಯಾತ ಪಾಕತಜ್ಞರಾದ ಪ್ರಸಾದ್ ಭಟ್ ಘಾಟೆ ಇವರು ದೀಪ ಬೆಳಗಿಸಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.ನಂತರ ಭಜನೆ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ  ಮಹಾಪೂಜೆ ನಂತರ ಶ್ರೀ ದೇವರಿಗೆ ಸಾಮೂಹಿಕ ವಿಶೇಷ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಪ್ರತಿ ದಿನ  ಬೆಳಿಗ್ಗೆ ಮತ್ತು ಸಂಜೆ ಭಜನೆ ಮತ್ತು ರಾತ್ರಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ ನಡೆಯಿತು.ನವರಾತ್ರಿಯ ನಾಲ್ಕು ದಿನ ಸಂಜೆ ವಿವಿಧ ಭಜನಾ ತಂಡದಿಂದ ಕುಣಿತ ಭಜನೆ ನಡೆಯಿತು. ಅ.20 ರಂದು ಬೆಳಿಗ್ಗೆ  ಸಾಮೂಹಿಕ ಚಂಡಿಕಾ ಹೋಮ ಪ್ರಾರಂಭವಾಗಿ ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಅ.23ರಂದು ಬೆಳಿಗ್ಗೆ ವಿಶೇಷ ಆಯುಧ ಪೂಜೆ ನಡೆಯಿತು. ಅ.24 ರಂದು ಬೆಳಿಗ್ಗೆ ಕದಿರು ತುಂಬಿಸುವುದು ನಂತರ ಅಕ್ಷರಾಭ್ಯಾಸ, ಭಜನೆ, ಮಧ್ಯಾಹ್ನ ವಿಶೇಷ ಅಲಂಕಾರ ಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯುವ ಮೂಲಕ ಸಂಭ್ರಮದ ನವರಾತ್ರಿ ಉತ್ಸವ ಸಂಪನ್ನ ಗೊಂಡಿತು.ದೇವಸ್ಥಾನದ ಆಡಳಿತ ಮಂಡಳಿ, ನವರಾತ್ರಿ ಉತ್ಸವ ಸಮಿತಿ ಸದಸ್ಯರು ಹಾಗೂ ಊರ ಪರವೂರ ಸುಮಾರು ಐದು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here