ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಧಾರ್ಮಿಕ ಸಭೆ

0

ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಧಾರ್ಮಿಕ ಸಭೆ ನಡೆಯಿತು.ಸಭೆಯಲ್ಲಿ ಆಶ ಬೆಳ್ಳಾರೆರವರು ಧಾರ್ಮಿಕ ಉಪನ್ಯಾಸ ನೀಡಿದರು. ಇಡ್ಕಿದು ಸೇವಾ ಸಹಕಾರಿ‌ ಸಂಘದ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಬೀಡಿನಮಜಲು. ಡಾ. ಶ್ರೀಶ ಬೈಪದವು,ಭಜನಾಮಂದಿರದ ಗೌರವ ಸಲಹೆಗಾರರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಧ್ಯಕ್ಷರಾದ ಜಗದೀಶ ಪೂಜಾರಿ ಅಳಕೆಮಜಲು,ಮಹಿಳಾ ಸಮಿತಿ ಅಧ್ಯಕ್ಷರಾದ ಸುಗಂಧಿನಿ ಪೆಲತ್ತಿಂಜ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ಪೆಲತ್ತಿಂಜ ಸ್ವಾಗತಿಸಿದರು. ಉದಯಕುಲಾಲ್ ವಂದಿಸಿದರು. ಖಜಾಂಜಿ ಸುಧೀರ್ ನಾಯ್ಕ್ ಕೆಮನಾಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here