ಬಂಟಸಿರಿ ವಿವಿದ್ಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಜಗನ್ನಾಥ ರೈ, ಉಪಾಧ್ಯಕ್ಷರಾಗಿ ದಯಾನಂದ ರೈ

0

ಪುತ್ತೂರು: ಬಂಟಸಿರಿ ವಿವಿದ್ಧೋದ್ಧೇಶ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆದು ಎಲ್ಲಾ ಹನ್ನೆರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ನುಳಿಯಾಲು ಜಗನ್ನಾಥ ರೈ ಮಾದೋಡಿ, ಉಪಾಧ್ಯಕ್ಷರಾಗಿ ದಯಾನಂದ ರೈ ಮನವಳಿಕೆಗುತ್ತು, ನಿರ್ದೇಶಕರುಗಳಾಗಿ ಜಯರಾಮ ರೈ ನುಳಿಯಾಲು, ಚನಿಲ ತಿಮ್ಮಪ್ಪಶೆಟ್ಟಿ, ಎಚ್. ಪ್ರವೀಣ್ ಭಂಡಾರಿ, ಪುರಂದರ ರೈ ಮಿತ್ರಂಪಾಡಿ, ಬಾಲಕೃಷ್ಣ ಶೆಟ್ಟಿ ಕೊಂಡೆವೂರು, ಬೂಡಿಯಾರ್ ರಾಧಾಕೃಷ್ಣ ರೈ, ಸಂಜೀವ ಆಳ್ವ ಹಾರಾಡಿ, ಕೆ. ವಸಂತ ಕುಮಾರ್ ರೈ ದುಗ್ಗಳ, ಅನಿತಾ ಹೇಮನಾಥ ಶೆಟ್ಟಿ ಕಾವು ಹಾಗೂ ವಿದ್ಯಾಪ್ರಸಾದ್ ಆಳ್ವ ಉಪ್ಪಳಿಗೆರವರು ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಸಂಘದ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್ ಹಾಗೂ ಬಂಟಸಿರಿ ವಿವಿದ್ಧೋದ್ಧೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ರೈ ನಡುಬೈಲು ಅವರು ನಡೆಸಿಕೊಟ್ಟರು.


ಬಂಟಸಿರಿ ಸಹಕಾರ ಸಂಘದ ಸಿಬ್ಬಂದಿಗಳು ಸಹಕರಿಸಿದರು. ಅಧ್ಯಕ್ಷರಾಗಿ ಆಯ್ಕೆಗೊಂಡ ನುಳಿಯಾಲು ಜಗನ್ನಾಥ ರೈ ಮಾದೋಡಿಯವರು 3ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಇವರು ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿ ಹಾಗೂ ಡಿ.ವೈ.ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ದಯಾನಂದ ರೈ ಮನವಳಿಕೆ ಗುತ್ತುರವರು ಬಂಟರಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here