ನಾಳೆ (ಅ.31): ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಎ ಪಿ ರಾಧಾಕೃಷ್ಣ ಸೇವಾ ನಿವೃತ್ತಿ

0

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲರೂ ವಿಭಾಗದ ಮುಖ್ಯಸ್ಥರೂ ಆದ ಡಾ.ಎ ಪಿ ರಾಧಾಕೃಷ್ಣರವರು 36 ವರ್ಷಗಳ ಸುದೀರ್ಘ ಸೇವೆಯ ಬಳಿಕ ಅ.31ರಂದು ಸೇವಾ ನಿವೃತ್ತಿ ಹೊಂದಲಿರುವರು.

13.10.1963ರಂದು ಮುಂಬೈಯಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂಟ್ಯಾರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಪುತ್ತೂರಿನ ಸಂತ ಫೀಲೋಮಿನಾ ಪ್ರೌಢಶಾಲೆಯಲ್ಲಿ, ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದಿಂದ   ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹಾಗೂ ರೇಡಿಯೇಶನ್‌ ಫಿಸಿಕ್ಸ್‌ ನಲ್ಲಿ ಪಿಹೆಚ್‌ ಡಿ ಪದವಿಯನ್ನು ಪಡೆದು ವಿವೇಕಾನಂದ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ತಮ್ಮ ಅಧ್ಯಾಪನವೃತ್ತಿಯನ್ನು ಪ್ರಾರಂಭಿಸಿದ್ದು 1987ರಿಂದ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರವಿಭಾಗದಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿರುತ್ತಾರೆ. 2003-10ರ ನಡುವೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಿಯೋಜಿತರಾಗಿ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here