ಶಾಂತಿನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ನೆಲ್ಯಾಡಿ: ಮಕ್ಕಳಲ್ಲಿ ಕನ್ನಡಾಭಿಮಾನದ ಜಾಗೃತಿ ಹಾಗೂ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಸದುದ್ದೇಶದಿಂದ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಕನ್ನಡ ತಾಯಿಗೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಶಾಲಾ ಸಹಶಿಕ್ಷಕ ಮಂಜುನಾಥ ಮಣಕವಾಡರವರು ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮುಖ್ಯಗುರು ಪ್ರದೀಪ್ ಬಾಕಿಲ ಸಂದರ್ಭೋಚಿತವಾಗಿ ಮಾತನಾಡಿದರು. ಸಹಶಿಕ್ಷಕಿ ವೀಕ್ಷಿತಾ ಸ್ವಾಗತಿಸಿ, ವಂದಿಸಿದರು. ಸಹಶಿಕ್ಷಕಿಯರಾದ ಪ್ರಮೀಳಾ, ತಾರಾ ಹಾಗೂ ಸುನಂದ ಸಹಕರಿಸಿದರು.

LEAVE A REPLY

Please enter your comment!
Please enter your name here