ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಧ್ವಜಾರೋಹಣ ನೆರವೇರಿಸಿ ಕನ್ನಡಿಗರಾದ ನಾವು ಕನ್ನಡವನ್ನು ಸಮೃದ್ಧವಾಗಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಮಾತ್ರಭಾಷೆಯಲ್ಲಿಯೇ ವ್ಯವಹರಿಸಬೇಕು. ಕನ್ನಡದ ಉಳಿವು ನಮ್ಮ ಕೈಯಲ್ಲಿದೆ ಎಂದರು .

ಶಾಲಾ ಆಡಳಿತ ಅಧಿಕಾರಿಗಳಾದ ವಸಂತ ರೈ ಕಾರ್ಕಳ ಮಾತನಾಡಿ, ನಾವೆಲ್ಲಿದ್ದರೂ ಕನ್ನಡತನವನ್ನು, ಈ ಮಣ್ಣಿನ ಸಂಸ್ಕೃತಿಯನ್ನು ಮರೆಯದೆ ಕನ್ನಡಾಂಬೆಯ ಋಣವನ್ನು ತೀರಿಸಬೇಕು ಎಂದರು. ಮುಖ್ಯಗುರು ಸರಸ್ವತಿ ಎಂ ಸಂದರ್ಭೋಜಿತವಾಗಿ ಮಾತನಾಡಿದರು. ಕನ್ನಡ ಶಿಕ್ಷಕಿ ವಿನಯ ವಿ ಶೆಟ್ಟಿ ತಾಯಿ ಭುವನೇಶ್ವರಿಯ ಹಿರಿಮೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು. ಶಿಕ್ಷಕ ವೃಂದದವರು ಕನ್ನಡ ಅಭಿಮಾನವನ್ನು ಬಿಂಬಿಸುವ ಹಾಡುಗಳನ್ನು ಹಾಡಿದರು

LEAVE A REPLY

Please enter your comment!
Please enter your name here