ಕಲ್ಲೇರಿಯಲ್ಲಿ ಬಟ್ಟೆಯ ಕಸೂತಿ ತಯಾರಿಕೆ – 10 ದಿನಗಳ ಸ್ವ ಉದ್ಯೋಗ ತರಬೇತಿ

0

ಉಪ್ಪಿನಂಗಡಿ: ಮಂಗಳೂರಿನ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ನೇತೃತ್ವದಲ್ಲಿ, 10 ದಿನಗಳ ಬಟ್ಟೆ ಕಸೂತಿ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.


ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತರಬೇತಿಯು ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿಯಾಗಿದೆ. ಮಹಿಳೆಯರು ತರಬೇತಿ ಪಡೆದ ಬಳಿಕ ಬ್ಯಾಂಕ್ ಸಾಲ ಸೌಲಭ್ಯ ಪಡೆದು ಸ್ವಉದ್ಯೋಗ ಮಾಡಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ, ತರಬೇತುದಾರೆ ಸುಮನ ಉಪಸ್ಥಿತರಿದ್ದರು. ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತಲಿನ ಸುಮಾರು 25 ಮಹಿಳೆಯರು 10 ದಿನಗಳ ತರಬೇತಿ ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here