ಕೊಣಾಲು: ಬೈಕ್ ಪಲ್ಟಿ-ಸವಾರರಿಗೆ ಗಾಯ

0

ನೆಲ್ಯಾಡಿ: ಬೈಕ್ ಪಲ್ಟಿಯಾಗಿ ಸವಾರ ಹಾಗೂ ಸಹಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಮೊರಿಯ ಚರ್ಚ್ ಎದುರು ನ.1ರಂದು ರಾತ್ರಿ ನಡೆದಿದೆ.
ಬೈಕ್ ಸವಾರ ಇರ್ಷಾದ್ ಹಾಗೂ ಸಹ ಸವಾರ ಅಬ್ದುಲ್ ಬಶೀರ್ ಗಾಯಗೊಂಡವರಾಗಿದ್ದಾರೆ. ಇವರು ನೆಲ್ಯಾಡಿಯಿಂದ ಗೋಳಿತ್ತೊಟ್ಟು ಕಡೆಗೆ ಬೈಕ್(ಕೆಎ 21, ಇಸಿ 4512)ನಲ್ಲಿ ಬರುತ್ತಿದ್ದ ವೇಳೆ ಕೊಣಾಲು ಗ್ರಾಮದ ಮೊರಿಯ ಚರ್ಚ್ ಬಳಿ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಇರ್ಷಾದ್‌ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಸಹಸವಾರ ಅಬ್ದುಲ್ ಬಶೀರ್ ಅವರ ಬೆನ್ನಿಗೆ ಗಾಯವಾಗಿದೆ. ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಳಿತ್ತೊಟ್ಟು ನಿವಾಸಿ ಅಬ್ದುಲ್ ರಜಾಕ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here