ವಸತಿ ಯೋಜನೆಯಡಿ ತಡೆಹಿಡಿದಿರುವ ಫಲಾನುಭವಿಗಳ ಅನುದಾನ ಬಿಡುಗಡೆಗೆ ನಿಗಮ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

0

ಪುತ್ತೂರು :ವಸತಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದಾಗಿ ತಡೆಹಿಡಿದಿರುವ ಫಲಾನುಭವಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಮಾಡಿದರು.

 ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ವಿವಿಧ ತಾಂತ್ರಿಕ ಕಾರಣದಿಂದಾಗಿ ನಿಗಮದಿಂದ ತಡೆ ಹಿಡಿಯಲಾಗಿದ್ದು ಸದರಿ ಸಮಸ್ಯೆಯನ್ನು ಬಗೆಹರಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಕೋರಲಾಗಿದ್ದರು ನಿಗಮದ ವತಿಯಿಂದ ಸಮಸ್ಯೆಯನ್ನು ಇವರಿಗೂ ಬಗೆಹರಿಸಿರುವುದಿಲ್ಲ. 

ಆದ್ದರಿಂದ ಸಮಸ್ಯೆಯನ್ನು ಪರಿಹರಿಸಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಇದರ ವ್ಯವಸ್ಥಾಪಕ ನಿರ್ದೇಶಕರಿಗೆ ಬೆಂಗಳೂರಿನಲ್ಲಿ ಮನವಿಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here