ಈಶ್ವರಮಂಗಲ: ಹೆಚ್ಚುವರಿ ಸರ್ಕಾರಿ ಬಸ್ಸ್‌ಗಾಗಿ ಮನವಿ- ಶಾಸಕರಿಂದ ಸ್ಪಂದನೆ

0

ಪುತ್ತೂರು:ಈಶ್ವರಮಂಗಲ ಭಾಗದಲ್ಲಿ ಶಾಲಾ ವಿಧ್ಯಾರ್ಥಿಗಳಿಗೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜಿಗೆ ತಲುಪಲು ಸಾಧ್ಯವಾಗದೇ ಕುರಿತು ಹಾಗೂ ವಿದ್ಯಾರ್ಥಿಗಳು ಬಸ್ ನಲ್ಲಿ ನೇತಾಡಿಕೊಂಡು ಹೋಗುವ ಅಪಾಯಕಾರಿ ಸ್ಥಿತಿಯನ್ನು ವಿವರಿಸಿ ಇದರ ಕುರಿತಾಗಿ ಕ್ರಮ ಕೈಗೊಳ್ಳುವಂತೆ ಈಶ್ವರಮಂಗಲ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಹಾಗೂ ಇನ್ನೀತರರು ಸೇರಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗ್ರಾಮಕ್ಕೆ ಹೆಚ್ಚುವರಿ ಬಸ್ಸು ಒದಗಿಸಿಕೊಡಬೇಕಾಗಿ ಮನವಿ ಮಾಡಲಾಯಿತು. ಮನವಿಗೆ ಸ್ಪಂದಿಸಿದ ಶಾಸಕರು ಆದಷ್ಟು ಬೇಗ ಬಸ್ಸು ಒದಗಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here