ರಾಜ್ಯಮಟ್ಟದ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ರಿಲೇ ತಂಡ ದ್ವಿತೀಯ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ 14ರ ವಯೋಮಾನದ ಬಾಲಕ – ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರತೀಕ್ಷಾ(ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ಕೀರ್ತಿ (ಮೋನಪ್ಪ ಮತ್ತು ಲಲಿತಾ ದಂಪತಿಗಳ ಪುತ್ರಿ), ತ್ರಿಶಾ (ಸತೀಶ್ ಮತ್ತು ಪುಷ್ಪಲತಾ ದಂಪತಿಗಳ ಪುತ್ರಿ), ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಇವರ ರಿಲೇ ತಂಡ 55.7 ಸಮಯದಲ್ಲಿ ಗುರಿ ತಲುಪಿ ನೂತನ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಆಯ್ಕೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಶ್ರದ್ಧಾ ಶೆಟ್ಟಿ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here