ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಸೂಕ್ತ ಕಾನೂನು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಆಗ್ರಹ

0

ಕೊಲೆ ಪ್ರಕರಣಗಳನ್ನು ಶಾಸಕರು ಗಂಭೀರವಾಗಿ ಪರಿಗಣಿಸಬೇಕು-ಡಾ.ವಿಶು ಕುಮಾರ್

ಪುತ್ತೂರು: ಕಲ್ಲೇಗ ಟೈಗರ‍್ಸ್ ತಂಡವನ್ನು ಕಟ್ಟಿಕೊಂಡು ಮುನ್ನಡೆಸುತ್ತಿದ್ದ ಉತ್ತಮ ಗುಣದ ಯುವಕನಾಗಿದ್ದ ಅಕ್ಷಯ್ ಅವರ ಕೊಲೆ ಆತಂಕಕಾರಿಯಾಗಿದ್ದು ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ದ.ಕ ಜಿಲ್ಲಾಧ್ಯಕ್ಷ ಡಾ.ವಿಶು ಕುಮಾರ್ ಆಗ್ರಹಿಸಿದ್ದಾರೆ.
ಕಲ್ಲೇಗ ಟೈಗರ‍್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ನಡೆಸಿರುವ ಕೃತ್ಯವನ್ನು ಖಂಡಿನೀಯ. ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಅವರು

ಪುತ್ತೂರಿನಲ್ಲಿ ಪದೇ ಪದೇ ಕೊಲೆಗಳಾಗುತ್ತಿದ್ದು ಆತಂಕಕಾರಿ ವಿಚಾರವಾಗಿದೆ. ಪುತ್ತೂರಿನ ಶಾಸಕರು ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here