ಕಡಬ: ಪಂಚಾಯತ್ ರಾಜ್ ಸಮಾವೇಶದ ಪೂರ್ವಭಾವಿ ಸಭೆ

0

ಕಡಬ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ನಡೆಯಲಿರುವ ಪಂಚಾಯತ್ ರಾಜ್ ಜಿಲ್ಲಾ ಸಮಾವೇಶದ ಕುರಿತ ಪೂರ್ವಭಾವಿ ಸಭೆ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಪಂಚಾಯತ್ ರಾಜ್ ಸಂಘಟನೆ ಆಶ್ರಯದಲ್ಲಿ ನ.10ರಂದು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿಯವರು ಮಾತನಾಡಿ, ಪಂಚಾಯತ್ ರಾಜ್ ಜಿಲ್ಲಾ ಸಮಾವೇಶ ಯಶಸ್ವಿಯಾಗಿ ನಡೆಯಬೇಕು. ಈ ಸಭೆಯಲ್ಲಿ ಗ್ರಾ.ಪಂ.ಸದಸ್ಯರು, ಮಾಜಿ ಸದಸ್ಯರು, ಜಿ.ಪಂ.,ತಾ.ಪಂ.ಮಾಜಿ ಸದಸ್ಯರು, ಕಾಂಗ್ರೆಸ್ ವಲಯ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು. ಕಡಬ ಬ್ಲಾಕ್‌ನ ಪ್ರತಿ ಗ್ರಾ.ಪಂ.ವ್ಯಾಪ್ತಿಯಿಂದ ಕನಿಷ್ಠ 50 ಜನ ಈ ಸಮಾವೇಶದಲ್ಲಿ ಭಾಗವಹಿಸಬೇಕೆಂದು ಹೇಳಿದರು. ಕಡಬ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬಳ್ಳೇರಿಯವರು ಮಾತನಾಡಿ, ಪಂಚಾಯತ್ ರಾಜ್ ಸಮಾವೇಶವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಗ್ರಾಮ ಪಂಚಾಯತ್ ಸದಸ್ಯರ ಮೇಲೆ ಇದೆ ಎಂದರು. ಕಡಬ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಬಿಳಿನೆಲೆ ಸಂದರ್ಭೋಚಿತವಾಗಿ ಮಾತನಾಡಿದರು.

ಕಡಬ ಬ್ಲಾಕ್ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆಯವರು ಜಿಲ್ಲಾ ಸಮಾವೇಶದ ಬಗ್ಗೆ ಮಾಹಿತಿ ನೀಡಿ, ಈ ಸಮಾವೇಶದಲ್ಲಿ ಗ್ರಾ.ಪಂ. ಹಾಲಿ ಸದಸ್ಯರಿಗೆ, ಮಾಜಿ ಸದಸ್ಯರಿಗೆ ಮತ್ತು ಜಿ.ಪಂ., ತಾ.ಪಂ.ಮಾಜಿ ಸದಸ್ಯರನ್ನು ಸನ್ಮಾನಿಸಲಾಗುತ್ತದೆ. ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಹೇಳಿದರು. ಕಡಬ ಬ್ಲಾಕ್ ವತಿಯಿಂದ ಪಂಚಾಯತ್ ಕಾರ್ಯಪಡೆಯ ಸಮಿತಿಗೆ ಶಿರಾಡಿ ಗ್ರಾ.ಪಂ. ಅನ್ನು ಈ ವೇಳೆ ಆಯ್ಕೆ ಮಾಡಲಾಯಿತು.

ಕಡಬ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಕಡಬ, ಜಿಲ್ಲಾ ಸಮಿತಿ ಸದಸ್ಯ ಚೆರಿಯನ್, ಎಪಿಎಂಸಿ ಮಾಜಿ ನಿರ್ದೇಶಕ ರಾಮಕೃಷ್ಣ ಹೊಳ್ಳಾರು, ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ಶಶಿಧರ್ ಬೊಟ್ಟಡ್ಕ, ಶಿರಾಡಿ ಗ್ರಾ.ಪಂ.ಅಧ್ಯಕ್ಷ ಕಾರ್ತಿಕೇಯನ್, ಉಪಾಧ್ಯಕ್ಷೆ ವಿನೀತ, ಶಿರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಿಮ್ಸನ್ ಕೆ.ಜಿ., ಕುಟ್ರುಪ್ಪಾಡಿ ಗ್ರಾ.ಪಂ.ಸದಸ್ಯ ಆಲಿ ಹೊಸಮಠ, ಬಿಳಿನೆಲೆ ಗ್ರಾ.ಪಂ.ಸದಸ್ಯೆ ಭವ್ಯ, ಪಕ್ಷದ ಮುಖಂಡರಾದ ಸತೀಶ್ ಕಡಬ, ಶರೀಫ್ ಎ.ಎಸ್.ಕಡಬ, ಸಾಜನ್, ಜಗದೀಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಗಂಗಾಧರ್ ಶೆಟ್ಟಿ ಹೊಸಮನೆ ಸ್ವಾಗತಿಸಿದರು. ಸತೀಶ್ ಕಡಬ ವಂದಿಸಿದರು.

LEAVE A REPLY

Please enter your comment!
Please enter your name here