ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋ ಪೂಜೆ ನ.13ರಂದು ಸಂಜೆ ಕಾಮಧೇನು ಗೋ ಶಾಲೆಯಲ್ಲಿ ನಡೆಯಿತು.
ದೇವಳದ ಪ್ರಧಾನ ಅರ್ಚಕರಾದ ವೇ ಮೂ ವಿ.ಎಸ್ ಭಟ್ ಗೋ ಪೂಜೆ ಕಾರ್ಯಕ್ರಮ ನೆರವೇರಿಸಿದರು. ವೇ ಮೂ ವಸಂತ ಕೆದಿಲಾಯ ಅವರು ಗೋ ಪೂಜೆ ಪ್ರಾರ್ಥನೆ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಬಿ ಐತ್ತಪ್ಪ ನಾಯ್ಕ್, ಡಾ. ಸುಧಾ ಎಸ್ ರಾವ್, ಶೇಖರ್ ನಾರಾವಿ, ಬಿ.ಕೆ.ವೀಣಾ, ರಾಮಚಂದ್ರ ಕಾಮತ್, ರವೀಂದ್ರ ರೈ ಬಳ್ಳಮಜಲು, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕೊಯಿಲ ಪಶು ಸಂಗೋಪನಾ ಇಲಾಖೆಯ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ದೇವಳದ ನೌಕರರು ಉಪಸ್ಥಿತರಿದ್ದರು. ಗೋ ಶಾಲೆಯ ನಿರ್ವಾಹಕ ನೌಕರರಿಗೆ ಮತ್ತು ಇತರ ನೌಕರರಿಗೆ ಇದೇ ಸಂದರ್ಭದಲ್ಲಿ ಗೋ ಪೂಜೆ ಪ್ರಸಾದ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here