ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲುರವರಿಗೆ ಸ್ಪೀಕರ್ ಯು.ಟಿ ಖಾದರ್ ರವರಿಂದ ಸನ್ಮಾನ

0

ರವೀಂದ್ರ ಶೆಟ್ಟಿಯವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಒಲಿಯಲಿ-ಯು.ಟಿ ಖಾದರ್

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈಯ್ದು ಜನಮನ್ನಣೆಯೊಂದಿಗೆ ಅನೇಕ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದು, ಇದೀಗ ದ.ಕ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರನ್ನು ನ.14ರಂದು ರಾಜ್ಯ ಸರಕಾರದ ಸ್ಪೀಕರ್ ಯು.ಟಿ ಖಾದರ್ ರವರು ಸನ್ಮಾನಿಸಿದರು.

ಮಂಗಳೂರಿನ ತಲಪಾಡಿ ಪಟ್ಲ ಇಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯ ಉದ್ಘಾಟನೆ ಸಂದರ್ಭ ಸ್ಪೀಕರ್ ಯು.ಟಿ ಖಾದರ್ ರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರನ್ನು ಸನ್ಮಾನಿಸಿ ಮಾತನಾಡಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದ ಪ್ರಗತಿಪರ ಕೃಷಿಕರಾದ ನಮ್ಮ ಆತ್ಮೀಯರೂ ಆಗಿರುವ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ನಮಗೆ ಸಂತೋಷವಾಗಿದೆ ಮಾತ್ರವಲ್ಲ ನಿಜಕ್ಕೂ ಅವರು ಅರ್ಹರು. ಮುಂದಿನ ದಿನಗಳಲ್ಲಿ ರವೀಂದ್ರ ಶೆಟ್ಟಿ ನುಳಿಯಾಲುರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಒಲಿಯಲಿ ಎಂದು ಹೇಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವೈಭವ್ ಶೆಟ್ಟಿ, ದಿನೇಶ್ ರೈ ಉಳ್ಳಾಲಗುತ್ತು, ಎನ್.ರವೀಂದ್ರ ಶೆಟ್ಟಿಯವರ ಪುತ್ರ ಸುಜೀರ್ ಕುಮಾರ್ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here