ಕಾಂಗ್ರೆಸ್ ಮುಖಂಡ ಮೇನಾಲ ಅಬ್ದುಲ್ ರಹಿಮಾನ್ ಹಾಜಿಯವರ ಪತ್ನಿ ನಿಧನ ಹಿನ್ನೆಲೆ – ಮೃತರ ಮನೆಗೆ ಶಾಸಕ ಅಶೋಕ್ ರೈ ಭೇಟಿ, ಸಾಂತ್ವನ

0

ಪುತ್ತೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರ ಪತ್ನಿ ಆಯಿಷಾ ಅವರು ನ.11ರಂದು ನಿಧನ ಹೊಂದಿದ್ದು, ಮೃತರ ಮನೆಗೆ ಶಾಸಕ ಅಶೋಕ್ ಕುಮಾರ್ ಅವರು ಭೇಟಿ ನೀಡಿದರು. ಅಬ್ದುಲ್ ರಹಿಮಾನ್ ಹಾಜಿ ಜೊತೆ ಕೆಲ ಹೊತ್ತು ಮಾತನಾಡಿದ ಶಾಸಕರು ಸಾಂತ್ವನ ಹೇಳಿದರು. ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಕಾಂಗ್ರೆಸ್ ಮುಖಂಡ ಅಬ್ದುಲ್ಲ ಮೆನಸಿಣಕಾನ ಮತ್ತಿತರರು ಉಪಸ್ಥಿತರಿದ್ದರು. ಆ ಬಳಿಕ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಭೇಟಿ ನೀಡಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here