ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಮಕ್ಕಳ ಸಂಭ್ರಮ, ದೀಪಾವಳಿ ಆಚರಣೆ

0

ನೆಲ್ಯಾಡಿ: ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಯೋಜನೆಯೊಂದಿಗೆ ’ ಮಕ್ಕಳ ಸಂಭ್ರಮ ಮತ್ತು ದೀಪಾವಳಿ ಸಂಭ್ರಮಾಚರಣೆ’ ನ.15ರಂದು ನಡೆಯಿತು.


ಅತಿಥಿಯಾಗಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಕಾರ ಪರಿವೀಕ್ಷಕರಾದ ಭಗಿನಿ ಮೀನಾಕ್ಷಿ ಮಾತಾಜಿ, ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಮೂಲಚಂದ್ರ, ಶಾಲಾ ವಿದ್ಯಾರ್ಥಿ ನಾಯಕ ಚೇತನ್, ಉಪನಾಯಕರಾದ ಮದ್ವಿತ್, ಯಜ್ಞೆಶ್, ಶಾಲಾ ಮುಖ್ಯಗುರು ಗಣೇಶ್ ವಾಗ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣ್ಯರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಹಣತೆ ಹಚ್ಚಿ ತದನಂತರ ಗೋ ಪೂಜೆಯನ್ನು ನೆರವೇರಿಸಿದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ಶಿಶು ಮಂದಿರದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಶಕ್ತ ಶೈಕ್ಷಣಿಕ ಸಾಲಿನಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಶೇಷವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಿತೇಶ್ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು. ಭೂಮಿಕಾ ನಿರೂಪಿಸಿದರು.

LEAVE A REPLY

Please enter your comment!
Please enter your name here