ಪುತ್ತೂರು ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ಶಿಬಿರದ ಪೂರ್ವ ತಯಾರಿ ಸಭೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪುತ್ತೂರು, ಅಖಿಲ ಕರ್ನಾಟಕ ಜನಜಗೃತಿ ವೇದಿಕೆ ಪುತ್ತೂರು ಇದರ ವತಿಯಿಂದ ಪುತ್ತೂರು ಯೋಜನಾ ಕಚೇರಿಯಲ್ಲಿ ಶಿಬಿರದ ಪೂರ್ವ ತಯಾರಿ ಸಭೆ ನಡೆಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಹಾಗೂ ಇತರ ಗಣ್ಯರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

ತಾಲ್ಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ , ಮಾಜಿ ಜಿಲ್ಲಾ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ತಾಲ್ಲೂಕು ಅಧ್ಯಕ್ಷ ಮಹಾಬಲ ರೈ ವಳತಡ್ಕ, ಕಲ್ಲೇಗ ಭಾರತ್ ಮಾತಾ ಹಾಲ್ ನಾ ಅಧ್ಯಕ್ಷರು ಹಾಗೂ ಶಿಬಿರದ ಗೌರವ ಅಧ್ಯಕ್ಷರಾದ ಸಂಜೀವ ನಾಯಕ್, ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್,ಜನಜಾಗೃತಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್ ಆಚಾರ್ಯ, ಶಿಬಿರ ದ ಸಂಪನ್ಮೂಲ ವ್ಯಕ್ತಿ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಶಿಬಿರದ ಅಧ್ಯಕ್ಷ ಹರೀಶ್ ಭಟ್, ಕಸಬಾ ಒಕ್ಕೂಟ ಅಧ್ಯಕ್ಷೆ ಗಾಯತ್ರಿ ಉಪಸ್ಥಿತರಿದ್ದರು.


ಶಿಬಿರದ ಗೌರವ ಅಧ್ಯಕ್ಷರಾಗಿ ಕಲ್ಲೇಗ ಭಾರತ್ ಹಾಲ್‌ನ ಅಧ್ಯಕ್ಷ ಸಂಜೀವ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹರೀಶ್ ಭಟ್‌ರವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ನಗರ ಸಭೆ ಸದಸ್ಯರು, ಊರಿನ ಗಣ್ಯರು ಸಂಘ ಸಂಸ್ಥೆ ಯ ಅಧ್ಯಕ್ಷರು ಪದಾಧಿಕಾರಿಗಳು, ಭಜನಾ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು, ನವಜೀವನ ಸಮಿತಿ ಅಧ್ಯಕ್ಷರು ಸದಸ್ಯರು, ಜನಜಾಗೃತಿ ವಲಯದ ಅಧ್ಯಕ್ಷರು ಸದಸ್ಯರು ಒಕ್ಕೂಟ ಅಧ್ಯಕ್ಷರು ಪದಾಧಿಕಾರಿಗಳು ತಾಲ್ಲೂಕು ಯೋಜನಾಧಿಕಾರಿಗಳು ಮೇಲ್ವಿಚಾರಕರು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here