ಪಟ್ಟೆ: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಣೆ

0

ಬಡಗನ್ನೂರುಃ  ರೋಟರಿ ಕ್ಲಬ್ ಪುತ್ತೂರು ಈಸ್ಟ್ ದಿ. ಲೋಕೇಶ್ ಪೆರ್ಗಡೆ ಮೆಮೋರಿಯಲ್ ಟ್ರಸ್ಟ್ ಸಹಯೋಗದೊಂದಿಗೆ ಪ್ರತಿಭಾ ಪ್ರೌಢಶಾಲೆಯ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 10 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷ ವೇಣುಗೋಪಾಲ ಪಟ್ಟೆ ವಹಿಸಿ, ವಿದ್ಯಾಸಂಸ್ಥೆಯಲ್ಲಿರುವ ಮೂಲಭೂತ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಕ್ಲಬ್ ಈಸ್ಟ್ ಇದರ ಅಧ್ಯಕ್ಷ  ಬೂಡಿಯರು ರಾಧಾಕೃಷ್ಣರೈ ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಯ ಬಗ್ಗೆ ಮೆಚ್ಚುಗೆಯನ್ನು  ವ್ಯಕ್ತಪಡಿಸಿದರು. ರೋಟರಿ ಕ್ಲಬ್ ನ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ವಿತ್ರಂಪಾಡಿ, ಪಟ್ಟೆ ವಿದ್ಯಾಸಂಸ್ಥೆಯ ಸಂಚಾಲಕ ನಾರಾಯಣ ಭಟ್ ಬಿರ್ನೋಡಿ ಉಪಸ್ಥಿತರಿದ್ದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯಗುರು ಸುಮನ ಸ್ವಾಗತಿಸಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ರಾಜಗೋಪಾಲ್ ವಂದಿಸಿದರು. ಪ್ರೌಢಶಾಲೆಯ ಸಹ ಶಿಕ್ಷಕ ವಿಶ್ವನಾಥ್ ಬೊಳ್ಳಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here