![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಪ್ರಾಥಮಿಕ ವಿಭಾಗ ಚಿತ್ರಕಲೆಯಲ್ಲಿ ರಂಗಪ್ಪ ಕಲಾದಗಿ(ಪ್ರಥಮ), ಪ್ರಾಥಮಿಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಲಕ್ಷ್ಮೀ. ಕೆ(ದ್ವಿತೀಯ), ಪ್ರಾಥಮಿಕ ವಿಭಾಗದ ಜನಪದ ಗೀತೆ ಸ್ಪರ್ಧೆಯಲ್ಲಿ ಸುನೀತಾ(ತೃತೀಯ), ಪ್ರೌಢವಿಭಾಗದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪೂರ್ಣಿಮಾ (ತೃತೀಯ), ಕಲಿಕೋಪಕರಣ ತಯಾರಿಕಾ ವಿಭಾಗದಲ್ಲಿ ಶಾಲಿನಿ(ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.