ಶ್ರೀ‌ ಮಹಾಲಿಂಗೇಶ್ವರ ದೇವಳ ವಠಾರದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆರ್ಥಿಕ ನೆರವು

0

ಪುತ್ತೂರು: ಶ್ರೀ‌ ಮಹಾಲಿಂಗೇಶ್ವರ ದೇವಳ ವಠಾರದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ ಸಮಿತಿಯಲ್ಲಿ ಸಕ್ರಿಯರಾಗಿದ್ದು ಇತ್ತೀಚೆಗೆ ನಿಧರಾದ ಪ್ರೇಮಲತಾ ಕುಟುಂಬಕ್ಕೆ ಸಮಿತಿಯಿಂದ ಆರ್ಥಿಕ ನೆರವನ್ನು ನೀಡಲಾಯಿತು.

ಆದರ್ಶ ಆಸ್ಪತ್ರೆಯ ಸಭಾಂಗಣದಲ್ಲಿ ಸಮಿತಿಯಿಂದ ನ.26 ರಂದು ನಡೆದ 57ನೇ ವರ್ಷದ ಗಣೇಶೋತ್ಸವ್ಸವ ಲೆಕ್ಕಪತ್ರ ಮಂಡನೆ ಸಭೆಯಲ್ಲಿ ಪ್ರೇಮಲತಾ ಅವರ ಆತ್ಮಕ್ಕೆ ಚಿರಶಾಂತಿ‌ಕೋರಿ ಮೌನಪ್ರಾರ್ಥನೆ ಬಳಿಕ ಅವರ ಪತಿ ಪೂವಪ್ಪ ಅವರಿಗೆ ಆರ್ಥಿಕ ನೆರವನ್ನು ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅವರು ನೀಡಿದರು. ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಉಪಾಧ್ಯಕ್ಷ ವಿಶ್ವನಾಥ ಗೌಡ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಕೋಶಾಧಿಕಾರಿ ಶ್ರೀನಿವಾಸ್, ಚಂದ್ರಶೇಖರ್ ಸಹಿತ ಹಲವಾರು ಮಂದಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here