ನರಿಮೊಗರು : ಸರಸ್ವತಿ ವಿದ್ಯಾಮಂದಿರದಲ್ಲಿ ವೀರ ಯೋಧ ಕ್ಯಾ.ಎಂ.ವಿ.ಪ್ರಾಂಜಲ್ ರಿಗೆ ನಮನ

0

ನರಿಮೊಗರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರಪತಿ ಪುರಸ್ಕಾರ ಸ್ಕೌಟ್ಸ್ ವೀರ ಯೋಧ ಕ್ಯಾ.ಎಂ.ವಿ.ಪ್ರಾಂಜಲ್ ಇವರಿಗೆ ನಮನ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ಸಂಚಾಲಕ ಅವಿನಾಶ್ ಕೊಡಂಕಿರಿ ಮಾತನಾಡಿ, ಭಾರತ ಮಾತೆಯ ಮಡಿಲಿಗೆ ತನ್ನ ಪ್ರಾಣವನ್ನು ಅರ್ಪಿಸಿ ವೀರ ಮರಣವನ್ನು ಹೊಂದಿದ ಯೋಧನಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆಯನ್ನು ಮಾಡಿ ನುಡಿ ನಮನ ಸಲ್ಲಿಸಿದರು.ಬಳಿಕ ಎಲ್ಲಾ ವಿದ್ಯಾರ್ಥಿಗಳಿಂದ ಮೌನ ಪ್ರಾರ್ಥನೆಯು ನೆರವೇರಿತು. ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್ ನಾಯಕರು,ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಎಲ್ಲಾ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here