ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವೀರಯೋಧ ಕ್ಯಾ. ಎಂ.ವಿ ಪ್ರಾಂಜಲ್ ಗೆ ನುಡಿ ನಮನ

0

ಕಾಣಿಯೂರು: ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ರಾಷ್ಟ್ರ ರಕ್ಷಣೆಯ ಕಾರ್ಯದ ಸಂದರ್ಭದಲ್ಲಿ ಉಗ್ರರ ದಾಳಿಯಲ್ಲಿ ಭಾರತಮಾತೆಯ ಮಡಿಲಿಗೆ ತನ್ನನ್ನು ಸಮರ್ಪಿಸಿದ ಭಾರತ ಮಾತೆಯ ಹೆಮ್ಮೆಯ ಪುತ್ರ ವೀರಯೋಧ 63 ರಾಷ್ಟ್ರೀಯ ರೈಫಲ್ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನುಡಿ ನಮನ ಸಲ್ಲಿಸಲಾಯಿತು.

ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಪ್ರಾಂಜಲ್ ರವರ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳರವರು ಮಾತನಾಡಿ, ಭಾರತಮಾತೆಯ ಸುಪುತ್ರರಾದ ನಾವು ಭಾರತಮಾತೆಯ ರಕ್ಷಣೆಯ ಪಣತೊಟ್ಟು ದೇಶ ಸೇವೆ ಮಾಡಿದರೆ ಜನ್ಮ ಸಾರ್ಥಕತೆಯನ್ನು ಪಡೆಯುತ್ತದೆ. ಹೀಗೆ ನಮಗಾಗಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರು ನಮಗೆಲ್ಲರಿಗೂ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಪ್ರಾಂಜಲ್ ರವರಿಗೆ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here