ಡಿ.3 ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 21ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ಆಶ್ರಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ವೈದ್ಯಕೀಯ ಶಿಬಿರದ 21ನೇ ತಿಂಗಳ ವೈದ್ಯಕೀಯ ಶಿಬಿರವು ಡಿ.3ರಂದು ನಡೆಯಲಿದೆ.


ಶಿಬಿರದಲ್ಲಿ ತಜ್ಞರಿಂದ ಸಾಮಾನ್ಯ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುವುದು. ತಜ್ಞ ವೈದ್ಯ ಡಾ.ಸುರೇಶ್ ಪುತ್ತೂರಾಯ, ಎಲುಬು ಮತ್ತು ಕೀಲು ತಜ್ಞ ಡಾ. ಸಚಿನ್ ಶಂಕರ್ ಹಾರಕೆರೆ. ಆಯುರ್ವೇದ ತಜ್ಞರಾದ ಡಾ. ಸಾಯಿ ಪ್ರಕಾಶ್ ಹಾಗೂ ಡಾ.ಗ್ರೀಷ್ಮಾ ಶಿಬಿರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿಕೊಡಲಿದ್ದಾರೆ. ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ. ಭಕ್ತಾದಿಗಳು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here