ಕುದ್ದುಪದವು: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

0

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24 ವ.) ಮೃತ ದುರ್ದೈವಿ.


ಕಾರ್ತಿಕ್ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ಸಂದರ್ಭದಲ್ಲಿ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿರಿಸಲಾಗಿದೆ‌. ಮೂಲಗಳ ಪ್ರಕಾರ ಕಾರ್ತಿಕ್ ಕೋರೆ ಸಮೀಪ ಕೆಲಸಮಾಡಿಕೊಂಡಿದ್ದು, ಕಾಲು‌ ಜಾರಿ ಆಳವಿರುವ ನೀರಿದ್ದ ಕಲ್ಲಿನ ಕೋರೆಗೆ ಬಿದ್ದು ಈಜಲು ಬಾರದೆ ಮೃತ ಪಟ್ಟಿದ್ದಾರೆ ಎನ್ನಲಾಗುತ್ತಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here