ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತಾಧಿಕಾರಿಯಾಗಿ ಗೋಪಾಲ್ ಅಧಿಕಾರ ಸ್ವೀಕಾರ

0

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತಾಧಿಕಾರಿಯಾಗಿ ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಗೋಪಾಲ್ ಡಿ.13ರಂದು ಅಧಿಕಾರ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧಿಕಾರ ಹಸ್ತಾಂತರ ಮಾಡಿದರು.

ನಿರ್ಗಮಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಧಾಕರ ರಾವ್ ರನ್ನು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಾಮೋದರ ರೈ ತೊಟ್ಲ, ವಿಠಲ ರೈ ಮೇರ್ಲ, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಗಿರೀಶ್ ಕಿನ್ನಿಜಾಲ್, ಭರತ್ ರೈ ಕೈಕಾರ, ಸಿಬ್ಬಂದಿ ಚಂದ್ರಕಲಾ, ಮಹೇಶ್ ಕಿರಣ್ ಮಲಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here