ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಿಶನ್ ಮೂಲೆ ಮೋಹನ್ ರೈ ನಿಧನ

0

ಪುತ್ತೂರು: ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಪ್ರಗತಿಪರ ಕೃಷಿಕ ಮಿಶನ್ ಮೂಲೆ ಮೋಹನ್ ರೈ(84ವ.)ಯವರು ಅಸೌಖ್ಯದಿಂದ ಡಿ.15 ರಂದು ರಾತ್ರಿ ನಿಧನ ಹೊಂದಿದ್ದಾರೆ.

ಮೃತ ಮೋಹನ್ ರೈಯವರು ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಮಾತ್ರವಲ್ಲ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಮೊಹನ್ ರೈಯವರು ಪತ್ನಿ ಸಂಪಾವತಿ ರೈ, ಪುತ್ರರಾದ ಕೆ.ಎಸ್.ಆರ್.ಟಿ.ಸಿಯಲ್ಲಿ ಉದ್ಯೋಗದಲ್ಲಿರುವ ರಮೇಶ್ ರೈ, ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷ ಸತೀಶ್ ರೈ, ಪುತ್ರಿಯರಾದ ರಜನಿ ಶೆಟ್ಟಿ, ಸುಹಾಸಿನಿ ಶೆಟ್ಟಿ, ಅಳಿಯಂದಿರಾದ ಜಗನ್ನಾಥ ಶೆಟ್ಟಿ, ಸೀತಾರಾಮ ಶೆಟ್ಟಿ, ಸೊಸೆಯಂದಿರಾದ ಶ್ರೀಲತಾ ರೈ, ಪೂಜಾ ರೈಯವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here