![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಮುಂದಿನ 5 ವರ್ಷಗಳ ಆಡಳಿತ ಅವಧಿಗೆ ನಡೆದ ಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ 12ರಲ್ಲಿ ಸಹಕಾರ ಭಾರತಿ ಬೆಂಬಲಿತದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. 1 ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸಂಘದ 13 ಸ್ಥಾನಗಳಲ್ಲಿ 3 ಸ್ಥಾನಕ್ಕೆ ಸಹಕಾರ ಭಾರತಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 10 ಸ್ಥಾನಗಳಿಗೆ ದ.18ರಂದು ನಡೆದ ಚುನಾವಣೆಯಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು, ಅದರಲ್ಲಿ ಎಲ್ಲಾ 9 ಸ್ಥಾನಗಳಲ್ಲಿ ಸಹಕಾರ ಭಾರತಿ ಬೆಂಬಲಿತದ ಅಭ್ಯರ್ಥಿಗಳು ಮತ್ತು 1 ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ರಿಟರ್ನಿಂಗ್ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ ರವರು ಚುನಾವಣೆ ನಡೆಸಿ ಮತ ಎಣಿಕೆ ಮಾಡಿ ಫಲಿತಾಂಶ ಘೋಷಣೆ ಮಾಡಿದರು. ಸಂಘದ ಸಿಬ್ಬಂದಿಗಳು ಸಹಕರಿಸಿದರು.
![](https://puttur.suddinews.com/wp-content/uploads/2023/12/213132.jpg)
3 ಸ್ಥಾನಕ್ಕೆ ಅವಿರೋಧ ಆಯ್ಕೆ:
ಆಡಳಿತ ಮಂಡಳಿಯ ಒಟ್ಟು 13 ಸ್ಥಾನಗಳಲ್ಲಿ 3 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಸಹಕಾರ ಭಾರತಿ ಬೆಂಬಲಿತರಾಗಿ ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಹಾಲಿ ನಿರ್ದೇಶಕಿ ಚಂದ್ರಾವತಿ ಮೇಲ್ಪಾದೆ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಹಾಲಿ ನಿರ್ದೇಶಕ ಜಗನ್ನೀವಾಸ ಗೌಡ ನಿಧಿಮುಂಡ, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಹಾಲಿ ನಿರ್ದೇಶಕ ಸುದೀಶ್ ಬೋರ್ಕರ್ರವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಸಾಮಾನ್ಯ ಸ್ಥಾನ:
7 ಸಾಮಾನ್ಯ ಸ್ಥಾನಕ್ಕೆ 13 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಅದರಲ್ಲಿ ಸಹಕಾರ ಭಾರತಿ ಬೆಂಬಲಿತದ ಚಂದ್ರಶೇಖರ ರಾವ್ ನಿಧಿಮುಂಡ(73ಮತ), ಚಂದ್ರಶೇಖರ ಭಟ್ ಪಳನೀರು (68ಮತ), ನಾರಾಯಣ ಶರ್ಮ ಬರಕೆರೆ (64ಮತ), ದಿವಾಕರ ಪ್ರಭು ಮುಂಡಕೊಚ್ಚಿ(62 ಮತ), ನಾರಾಯಣ ರೈ ಮದ್ಲ(61ಮತ), ಸುರೇಂದ್ರ ಬೋರ್ಕರ್ ನನ್ಯ(61 ಮತ), ಕಾಂಗ್ರೆಸ್ ಬೆಂಬಲಿತ ದಿವ್ಯನಾಥ ಶೆಟ್ಟಿ ಕಾವು(61 ಮತ)ರವರು ಗೆಲುವು ಸಾಧಿಸಿದ್ದಾರೆ.
ಮಹಿಳಾ ಮೀಸಲು ಸ್ಥಾನ:
2 ಮಹಿಳಾ ಮೀಸಲು ಸ್ಥಾನಕ್ಕೆ 4 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಅದರಲ್ಲಿ ಸಹಕಾರ ಭಾರತಿ ಬೆಂಬಲಿತದ ನಿರ್ಮಲಾ ಪೂವಂದೂರು( 71 ಮತ), ಪ್ರೇಮಲತಾ ಸಿ ಎಚ್ ಚಾಕೋಟೆ(63 ಮತ)ಯವರು ಗೆಲುವು ಸಾಧಿಸಿದ್ದಾರೆ.
ಪರಿಶಿಷ್ಠ ಪಂಗಡ ಮೀಸಲು ಸ್ಥಾನ: 1 ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ 2 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಅದರಲ್ಲಿ ಸಹಕಾರ ಭಾರತಿ ಬೆಂಬಲಿತದ ರಾಮಣ್ಣ ನಾಯ್ಕ ಆಚಾರಿಮೂಲೆ(72 ಮತ)ರವರು ಗೆಲುವು ಸಾಧಿಸಿದ್ದಾರೆ.