ಪಾಣಾಜೆ ಸುಬೋಧ ಪ್ರೌಢಶಾಲಾ ವಾರ್ಷಿಕ ಕ್ರೀಡೋತ್ಸವ

0

ನಿಡ್ಪಳ್ಳಿ; ಪಾಣಾಜೆ ಸುಬೋಧ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವವು ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯರವರ ಅಧ್ಯಕ್ಷತೆಯಲ್ಲಿ ಡಿ.19  ಜರಗಿತು.ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ  ಎನ್ವೆಂಚರ್ ಇಂಜಿನಿಯರಿಂಗ್ ಬೆಂಗಳೂರಲ್ಲಿ ಉದ್ಯೋಗದಲ್ಲಿರುವ ಜಯಪ್ರಕಾಶ್ ರೈ ಕಡಮಾಜೆ ಕ್ರೀಡೋತ್ಸವವನ್ನು ಉದ್ಘಾಟಿಸಿ ಧ್ವಜಾರೋಹಣ ಮಾಡಿ ಕ್ರೀಡೆಯ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.

 ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಬೋಧ ಪ್ರೌಢಶಾಲೆಯ ಇನ್ನೋರ್ವ ಹಿರಿಯ ವಿದ್ಯಾರ್ಥಿ ಬೆಂಗಳೂರಿನ ಉದ್ಯಮಿ ಹಾಗೂ ಸೈಕಲ್ ಅಭಿಯಾನದ ಮೂಲಕ ಶಾಲೆಗೆ ದೇಣಿಗೆ  ಸಂಗ್ರಹಿಸುತ್ತಿರುವ ರಾಕೇಶ್ ರೈ ಕಡಮಾಜೆ ಅವರು ಜೀವನದಲ್ಲಿ ಧೈರ್ಯದಿಂದ ಮುನ್ನುಗ್ಗಿ ಸಾಧಿಸಬೇಕೆಂದರು.

ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ವಿದ್ಯಾರ್ಥಿನಿಯರಾದ ದೀಪಿಕಾ, ದೀಪಕ್ ಹಾಗೂ  ಸಿಂಚನಾ ಪ್ರಾರ್ಥಿಸಿದರು. ಶಾಲಾ ಉಪನಾಯಕಿ ಗ್ರಿಷ್ಮಾ ಎ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.

 ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ಹಾಗೂ  ಏರೋಬಿಕ್ಸ್ ಪ್ರದರ್ಶಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ಅವರ ಮಾರ್ಗದರ್ಶನದಲ್ಲಿ ವಿವಿಧ ಆಟೋಟಗಳು ಜರಗಿದವು. ಮುಖ್ಯ ಶಿಕ್ಷಕ ಶ್ರೀಪತಿ  ಭಟ್ ಐ ವಂದಿಸಿದರು. ಸಹ ಶಿಕ್ಷಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಸಹಕರಿಸಿದರು

LEAVE A REPLY

Please enter your comment!
Please enter your name here