ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಬಿ.ಗುಣರಂಜನ್ ಶೆಟ್ಟಿ

0

ಪುತ್ತೂರು:ಪ್ರತಿಷ್ಠಿತ ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಚುನಾವಣೆ ದೆಹಲಿಯಲ್ಲಿ ನಡೆದಿದ್ದು ಕುಸ್ತಿ ಒಕ್ಕೂಟದ ಓರ್ವ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.ಇವರು ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲುಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಯ ಪುತ್ರ ಹಾಗೂ ಡಾ.ಸಾಯಿ ರಮೇಶ್ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಸಹೋದರ.ಇಂಜಿನಿಯರಿಂಗ್ ಪದವೀಧರರಾಗಿರುವ ಬಿ.ಗುಣರಂಜನ್ ಶೆಟ್ಟಿಯವರು ಬೆಂಗಳೂರುನಲ್ಲಿ ಉದ್ಯಮಿಯಾಗಿದ್ದಾರೆ.

ಪ್ರಸ್ತುತ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರೂ ಆಗಿರುವ ಗುಣರಂಜನ್ ಶೆಟ್ಟಿಯವರು ಇದೀಗ ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಕರ್ನಾಟಕದ ಜನತೆ ಹೆಮ್ಮೆಪಡುವಂತಾಗಿದೆ.ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಇವರ ಅವಧಿಯಲ್ಲಿ ಅನೇಕ ಟೂರ್ನಮೆಂಟ್‌ಗಳು ನಡೆದಿದ್ದು, ಅನೇಕ ಕುಸ್ತಿಪಟುಗಳು ಬಹುಮಾನಗಳನ್ನು ಪಡೆದಿರುತ್ತಾರೆ.

ಇವರು ಬಂದ ನಂತರ ಕರ್ನಾಟಕ ಕುಸ್ತಿ ಪಟುಗಳಿಗೆ ಆನೆ ಬಲ ಬಂದಂತಾಗಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಬೆಂಗಳೂರು, ಐ ಕ್ಯಾರ್ ಬ್ರಿಗೇಡ್, ಐ ಕ್ಯಾರ್ ಫೌಂಡೇಶನ್, ಜಯಕರ್ನಾಟಕ ಜನಪರ ವೇದಿಕೆಯ ಸ್ಥಾಪಕಾಧ್ಯಕ್ಷರೂ ಆಗಿರುವ ಇವರು ಇತ್ತೀಚೆಗೆ ರಾಜ್ಯ ರಾಜಧಾನಿಯಲ್ಲಿ ಯಶಸ್ವಿಯಾಗಿ ನಡೆದು ಇತಿಹಾಸ ಸೃಷ್ಟಿಸಿರುವ ಬೆಂಗಳೂರು ಕಂಬಳ ಸಮಿತಿಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here