ಪುತ್ತೂರ್ದ ಬಂಟ ಜವನೆರೆ ಗೊಬ್ಬು ‘ಬಂಟ್ಸ್ ಪ್ರೀಮಿಯರ್ ಲೀಗ್-2024’ ಟೀಮ್ ಹರಾಜು ಪ್ರಕ್ರಿಯೆ

0

ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ, ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇದರ ಸಹಕಾರದೊಂದಿಗೆ ಪುತ್ತೂರ್ದ ಬಂಟ ಜವನೆರೆ ಗೊಬ್ಬು ಬಂಟ್ಸ್ ಪ್ರೀಮಿಯರ್ ಲೀಗ್ 2024 ಜ.06 ಮತ್ತು 07 ರಂದು ಪುತ್ತೂರು ತಾಲೂಕು ಕ್ರೀಡಾಂಗಣ ಕೊಂಬೆಟ್ಟುವಿನಲ್ಲಿ ನಡೆಯಲಿದ್ದು ಕ್ರಿಕೆಟ್ ಆಟದ ಟೀಮ್ ಹರಾಜು ಪ್ರಕ್ರಿಯೆಯು ಡಿ.15 ರಂದು ಆಸ್ಮಿ ಕಂಫರ್ಟ್ ಬೈಪಾಸ್ ರೋಡ್ ಪುತ್ತೂರಿನಲ್ಲಿ ನಡೆಯಿತು.

ಇದರ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘ ಪುತ್ತೂರು ತಾಲೂಕು ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಕಾರ್ಯಕ್ರಮದ ಕಾರ್ಯದರ್ಶಿ ರಂಜನಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಕೆ.ಸಿ, ಜೊತೆ ಕಾರ್ಯದರ್ಶಿ ಶುಭಾ ಉಪಸ್ಥಿತರಿದ್ದರು. ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ ರೈ ಸ್ವಾಗತಿಸಿ ಕ್ರೀಡಾ ಸಂಚಾಲಕ ನವೀನ್ ರೈ ಪಂಜಳ ವಂದಿಸಿದರು. ಮನ್ಮಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹರಾಜು ಪ್ರಕ್ರಿಯೆಯಲ್ಲಿ 8 ತಂಡಗಳು ಭಾಗವಹಿಸಿ 104 ಕ್ರೀಡಾ ಆಟಗಾರರ ಹರಾಜು ಪ್ರಕ್ರಿಯೆ ನಡೆಯಿತು.

LEAVE A REPLY

Please enter your comment!
Please enter your name here