ಪಡುಮಲೆ : ಜ.23 ರಂದು ನಡೆಯಲಿರುವ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ  ವಠಾರದಲ್ಲಿ  ಶ್ರೀ ಕಟೀಲು ಮೇಳದ ಯಕ್ಷಗಾನ ಬಯಲಾಟ ಸೇವಾ ಸಮಿತಿ  ಮತ್ತು ಊರ ಹತ್ತು ಸಮಸ್ತರು, ಪಡುಮಲೆ ಇದರ ವತಿಯಿಂದ ಜ.23 ರಂದು ನಡೆಯಲಿರುವ ಯಕ್ಷಗಾನ ಬಯಲಾಟ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಡಿ.26 ರಂದು ಶ್ರೀ ಕ್ಷೇತ್ರದ ಸನ್ನಿಧಿಯಲ್ಲಿ ನಡೆಯಿತು.  ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ದೇವರ ಸನ್ನಿಧಿಯಲ್ಲಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಸಿ.ಯಚ್ ರವರು  ಬಯಲಾಟ ಸಮಿತಿ ಅಧ್ಯಕ್ಷ ಉದಯ ಕುಮಾರ್ ರತ್ನ ಮಾನಸ ಪಡುಮಲೆ, ರವರ ಸಮ್ಮುಖದಲ್ಲಿ   ಅಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಡಗನ್ನೂರು ಗ್ರಾ.ಪಂ ಸದಸ್ಯರಾದ ರವಿರಾಜ ರೈ ಸಜಂಕಾಡಿ,  ಶ್ರೀಮತಿ ಕೆ, ಸಮಿತಿ ಸದಸ್ಯ ತ್ಯಾಂಪಣ್ಣ ಸಿ.ಯಚ್, ಹಾಗೂ ಸುಳ್ಯಪದವು ಮಹಾಲಕ್ಷ್ಮಿ ಮಹಿಳಾ  ಭಜನಾ ತಂಡದ ಸದಸ್ಯರು ಹಾಗೂ ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here