ನೇರೆಂಕಿಗುತ್ತು: ಶ್ರೀ ದೈವಗಳ ನೇಮೋತ್ಸವ, ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ

0

ರಾಮಕುಂಜ: ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ದೈವಗಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಡಿ.25 ಮತ್ತು 26ರಂದು ನಡೆಯಿತು. ಡಿ.18ರಂದು ಗೊನೆ ಮುಹೂರ್ತ ನಡೆಯಿತು.

ಡಿ.25ರಂದು ಪೂರ್ವಾಹ್ನ ದೈವಸ್ಥಾನದಲ್ಲಿ ಸ್ವಸ್ತಿ ಪುಣ್ಯಾಹವಾಚನ, ಗಣಪತಿ ಹೋಮ, ದುರ್ಗಾಹೋಮ, ಪಂಚವಿಂಶತಿ ಕಲಶ, ತಂಬಿಲ ಸೇವೆ ನಡೆಯಿತು. ಸಂಜೆ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ, ಪರಿವಾರ ದೈವಗಳು ಮತ್ತು ಶ್ರೀ ಬ್ರಹ್ಮಬೈದರ್ಕಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ರಾತ್ರಿ ಕಲ್ಲುರ್ಟಿ ದೈವದ ನೇಮ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೈಯೊಂಕ್ಲು, ಮೈಸಂದಾಯ, ಧೂಮಾವತಿ, ಭಾವನ ದೈವದ ನೇಮ ನಡೆಯಿತು.

ಡಿ.26ರಂದು ಪೂರ್ವಾಹ್ನ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವದ ನೇಮ ನಡೆದು ಮಧ್ಯಾಹ್ನ ಬಟ್ಟಲು ಕಾಣಿಕೆ, ಕೈಕಾಣಿಕೆ, ಹರಕೆ ಸಮರ್ಪಣೆ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಧರ್ಮಜಾಗೃತಿ ಸಭೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ನಂತರ ಶ್ರೀ ಬ್ರಹ್ಮಬೈದರ್ಕಳ ಗರಡಿ ಇಳಿಯುವುದು, ಬೈದೇರುಗಳು ಮೀಸೆ ಧರಿಸುವುದು, ಮಾಣಿ ಬಾಲೆ ಗರಡಿ ಇಳಿಯುವುದು, ಕೋಟಿಚೆನ್ನಯ ದರ್ಶನ ಪಾತ್ರಿಗಳ ಸೇಟ್, ಬೈದೇರುಗಳ ಸೇಟ್, ಕಂಚಿಕಲ್ಲಿಗೆ ಕಾಯಿ ಹೊಡೆಯುವ ಕಾರ್ಯಕ್ರಮ ನಡೆಯಿತು. ಡಿ.25ರಂದು ಬೆಳಿಗ್ಗೆ ಆರಂಭಗೊಂಡ ಕಾರ್ಯಕ್ರಮ ಡಿ.27ರ ಸೂರ್ಯೋದಯಕ್ಕೆ ಸಂಪನ್ನಗೊಂಡಿತ್ತು.

ದೈವಸ್ಥಾನದ ಆಡಳಿತ ಮೊಕ್ತೇಸರರು, ಪುತ್ತೂರು ಮಾಸ್ಟರ್ ಪ್ಲಾನರಿಯ ಎಸ್.ಕೆ.ಆನಂದ, ರೇಖಾ ಆನಂದ್, ಅಕ್ಷಯ್ ಎಸ್.ಕೆ., ಅರ್ಜುನ್ ಎಸ್.ಕೆ., ಆಕಾಶ್ ಎಸ್.ಕೆ., ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಭಟ್ ಟಿ., ಉಪಾಧ್ಯಕ್ಷ ಪ್ರಸನ್ನ ನಿಸರ್ಗ, ಸಂಚಾಲಕರಾದ ಕೃಷ್ಣಮೂರ್ತಿ ಇ.ಕಲ್ಲೇರಿ, ಕಾರ್ಯದರ್ಶಿ ಕಿರಣ್ ಪಾದೆ, ಜೊತೆ ಕಾರ್ಯದರ್ಶಿ ಶ್ಯಾಮ್‌ಪ್ರಸಾದ್ ಕಾಯಾರ, ಧಾರ್ಮಿಕ ಮಾರ್ಗದರ್ಶಕರಾದ ಎ.ಮಾಧವ ಆಚಾರ್ಯ ಇಜ್ಜಾವು, ಸದಸ್ಯರಾದ ಎಂ.ಹರಿನಾರಾಯಣ ಆಚಾರ್ ಎರಟಾಡಿ, ಶೇಖರ ಕಟ್ಟಪುಣಿ, ಡಾ|ಜಿನಚಂದ್ರ ಕಾರ್ಕಳ, ಬಿ.ಸಂಜೀವ ಪೂಜಾರಿ ಬಟ್ಲಡ್ಕ, ಮಹಾಬಲ ರೈ ರಾಮಜಾಲು ಸೇರಿದಂತೆ ವಿವಿಧ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಪರವೂರಿನ ಭಕ್ತಾದಿಗಳು ಸೇರಿದಂತೆ ಸಾವಿರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here