ತಾ| ಸರಕಾರಿ ನೌಕರರ ಸಂಘದ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ

0

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ತಾಲೂಕು ಘಟಕ 2024ನೇ ಸಾಲಿನ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆಯು ಡಿ. 30 ರಂದು ಸರಕಾರಿ ನೌಕರರ ಸಂಘದ ಕಛೇರಿಯಲ್ಲಿ ನಡೆಯಿತು.


ತಾಲೂಕು ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಮೌರಿಸ್ ಮಸ್ಕರೇನ್ಹಸ್ ಹಾಗೂ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಕೆ.ರವರು ಜೊತೆಗೂಡಿ ಸಂಘದ ವಾರ್ಷಿಕ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಮೌರಿಸ್ ಮಸ್ಕರೇನ್ಹಸ್ ಮಾತನಾಡಿ, 2023ನೇ ವರ್ಷ ಕಳೆದುಹೋಯಿತು. ಇದೀಗ 2024 ಹೊಸ ವರ್ಷ ಬಂದೇ ಬಿಟ್ಟಿದೆ. ಈ ಹೊಸ ವರ್ಷವು ಎಲ್ಲರ ಬಾಳಿನಲ್ಲಿ ಸುಖವನ್ನು ತರಲಿ ಎಂದು ಹೇಳಿ ಶುಭ ಹಾರೈಸಿದರು. ಮಾಜಿ ಅಧ್ಯಕ್ಷ ಕೃಷ್ಣಪ್ಪ ಕೆ ಮಾತನಾಡಿ, ಇತಿಹಾಸದಲ್ಲಿ ಪ್ರಥಮ ಬಾರಿಗೆ ಈ ಹೊಸ ಕಟ್ಟಡದಲ್ಲಿ ಬಿಡುಗಡೆ ನಮ್ಮ ಸಂಘವು ಎಲ್ಲರ ಸಹಕಾರದೊಂದಿಗೆ ಒಗ್ಗಟ್ಟಿನೊಂದಿಗೆ ಮುಂದುವರೆಯೋಣ, ಹೊಸ ವರುಷ ಎಲ್ಲರಿಗೂ ಹರ್ಷದಾಯಕವಾಗಿರಲಿ ಎಂದು ಶುಭ ಹಾರೈಸಿದರು.


ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ್ ಬಿ, ಕೋಶಾಧಿಕಾರಿ ಕೃಷ್ಣ ಕೆ, ಉಪಾಧ್ಯಕ್ಷರಾದ ರಾಮಚಂದ್ರ ಹಾಗೂ ಹರಿಪ್ರಕಾಶ್ ಬೈಲಾಡಿ, ಸದಸ್ಯರಾದ ಲಿಂಡ್ಸೆ ಕೊಲಿನ್ ಸಿಕ್ವೇರಾ, ಕವಿತಾ, ಚಿದಾನಂದ, ವಿನೋದ್ ಕುಮಾರ್, ಗಿರಿಧರ್ ಗೌಡ, ಎಫ್.ಜಿ ಗೌಡ, ವಿಜಯಕುಮಾರ್, ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here