ಉಪ್ಪಿನಂಗಡಿ ಅಂಬೇಡ್ಕರ್ ವಸತಿ‌ಶಾಲೆಯ ಶಾಲಾ ವಾರ್ಷಿಕೋತ್ಸವ

0

ವಸತಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣವಾಗುವಲ್ಲಿ‌ ಪ್ರಯತ್ನ: ಶಾಸಕ ಅಶೋಕ್ ರೈ‌


ಪುತ್ತೂರು: ನಗರದ ಹೊರವಲಯದ‌ ಪಡ್ಡಾಯೂರಿನಲ್ಲಿರುವ ಅಂಬೇಡ್ಕರ್ ವಸತಿ‌ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುವಲ್ಲಿ ಪ್ರಯತ್ನ ಮಾಡುತ್ತೇನೆ ಮತ್ತು ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ ವಸತಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಪಡ್ಡಾಯೀರಿನಲ್ಲಿರುವ ಉಪ್ಪಿನಂಗಡಿ ಅಂಬೇಡ್ಕರ್ ವಸತಿ‌ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ವಸತಿ‌ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಇಲ್ಲಿನ ಶಿಕ್ಷಣ‌ ಮತ್ತು ಇತರೆ ಸೌಲಭ್ಯಗಳು ಚೆನ್ನಾಗಿರುವ ಬಗ್ಗೆ ಪೋಷಕರು ತಿಳಿಸಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕರು ಹೇಳಿದರು.ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಶಿಕ್ಷಣವನ್ನು‌ನೀಡಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಶಿಕ್ಷಕ‌ ರಕ್ಷಕ‌ ಸಮಿತಿ ಅಧ್ಯಕ್ಷ ರವೀಂದ್ರ ರೈ, ಸಮಾಜ ಕಲ್ಯಾಣ ಇಲಾಖೆ ಮೆನಜರ್ ಕೃಷ್ಣ ಕುಮಾರ್, ಶಾಲಾ ಪ್ರಾಂಶುಪಾಲ ಸತೀಶ್ ಟಿ , ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀದರ್ ಜಿ,ಪುಂಜಾಲಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್ ಕುಮಾರ್,ಎಸ್ ಜಿ ಎಂ ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸ,ಮೊರಾರ್ಜಿ ದೇಸಾಯಿ ವಸತಿ ಶಾಲೆ ಪುತ್ತೂರು ಪ್ರಾಂಶುಪಾಲ ಅರುಣ್ ಕುಮಾರ್, ಸಿಆರ್ ಪಿ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕಿ ವಾಣಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here