ಪೆರುವಾಯಿ ವಲಯ ಕಾಂಗ್ರೆಸ್‌ ಅಧ್ಯಕ್ಷ ಪಂಚಪಾಲ ಶೆಟ್ಟಿ ನಿಧನ-ಮೃತರ ಮನೆಗೆ ಶಾಸಕ ರೈ ಭೇಟಿ

0

ಪುತ್ತೂರು: ಪೆರುವಾಯಿ ಗ್ರಾಮ ವಲಯ ಕಾಂಗ್ರೆಸ್ ಅಧ್ಯಕ್ಷ ಪಂಚಪಾಲ ಶೆಟ್ಟಿ ಅಲ್ಪ ಕಾಲದ ಅಸೌಖ್ಯದಿಂದ ಜ.1 ರಂದು ಪೆರುವಾಯಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪುತ್ತೂರು ಶಾಸಕರಾದ ಆಶೋಕ್ ಕುಮಾರ್ ರೈ ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಸುಮಾರು 18 ವರ್ಷಗಳಿಂದ ವಲಯ ಅಧ್ಯಕ್ಷರಾಗಿ ,ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು. ಮೃತರ ನಿಧನಕ್ಕೆ ಪಕ್ಷದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here