ಬಳ್ಪ: ವಿದ್ಯುತ್ ಶಾಕ್‌ಗೆ ಪವರ್‌ಮ್ಯಾನ್ ರಘು ಮೃತ್ಯು

0

ಕಡಬ: ದುರಸ್ತಿ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಪ ಎಂಬಲ್ಲಿ ಜ.5ರಂದು ಅಪರಾಹ್ನ ಸಂಭವಿಸಿದೆ.


ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ರಘು ಎಸ್.ಆರ್. (32ವ.) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರಘು ಕಳೆದ ಒಂದೂವರೇ ವರ್ಷಗಳಿಂದ ಬಳ್ಪದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಬ ಸಮುದಾಯ ಆಸ್ಪತ್ರೆಗೆ ಮೃತದೇಹ ತರಲಾಗಿತ್ತು. ಮೃತ ರಘು ಅವರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.


ಕಳೆದ ಜೂನ್‌ನಲ್ಲಿ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಬಾಗಲಕೋಟೆಯ ದ್ಯಾಮಣ್ಣ ದೊಡ್ಮನಿ ಮೃತರಾಗಿದ್ದರು. ಇದೀಗ ಕಡಬ ತಾಲೂಕಿನಲ್ಲಿ ವರ್ಷದೊಳಗೆ ವಿದ್ಯುತ್ ಪ್ರವಹಿಸಿ ಇನ್ನೊರ್ವ ಪವರ್‌ಮ್ಯಾನ್ ಮೃತರಾಗಿದ್ದಾರೆ.

LEAVE A REPLY

Please enter your comment!
Please enter your name here