![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಈಶ್ವರಮಂಗಲ ಘಟಕದ ಸಕ್ರಿಯ ಕಾರ್ಯಕರ್ತ ಸುಜಿತ್ ಗಾಳಿಮುಖ ಅವರ ಪತ್ನಿ ಮತ್ತು ಮಗು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
![](https://puttur.suddinews.com/wp-content/uploads/2024/01/3eac6a6c-2fda-44e0-8cad-412d867c2df6.jpg)
ಅವರ ಚಿಕಿತ್ಸೆಗಾಗಿ ಜಾಗರಣ ಸೇವಾ ನಿಧಿಯ ಮೂಲಕ ಊರ ಹಾಗೂ ಪರವೂರ ಸಹೃದಯಿ ದಾನಿಗಳಿಂದ ಹಣವನ್ನು ಸಂಗ್ರಹಸಲಾಗಿತ್ತು. ಮೊದಲ ಹಂತದಲ್ಲಿ ಸಂಗ್ರಹವಾದ ಸುಮಾರು 1 ಲಕ್ಷ ರೂಪಾಯಿಯನ್ನು ಸಂಘಟನೆಯ ಗೌರವಾಧ್ಯಕ್ಷ ಕೃಷ್ಣ ಭಟ್ ಮುಂಡ್ಯ ಸಂಘಟನೆಯ ಪ್ರಮುಖರು ಮತ್ತು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಸುಜಿತ್ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಇದಕ್ಕೂ ಮುನ್ನ ಗ್ರಾಮಾಧಿಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
![](https://puttur.suddinews.com/wp-content/uploads/2024/01/57f04964-1170-4cf9-8b70-75fba35a9b9d.jpg)