ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಶಾಸಕಿ ನಯನ ಮೋಟಮ್ಮ, ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

0

ನೆಲ್ಯಾಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಮಲ್ಲಿಕಾ ಪಕ್ಕಳ ಹಾಗೂ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಜ.10ರಂದು ಭೇಟಿ ನೀಡಿದರು. ಈ ಹಿಂದೆ ಪ್ರಾರ್ಥಿಸಿದಂತೆ ಶಾಸಕಿ ನಯನ ಮೋಟಮ್ಮ ಅವರು ಮಹಾಗಣಪತಿ ದೇವರಿಗೆ ವಿಶೇಷ ರಂಗಪೂಜೆ ಸೇವೆಯನ್ನು ನೆರವೇರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ, ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಸಂಪ್ರದಾಯದಂತೆ ಇವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here