ಬನ್ನೂರು ಶನೀಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ ಫೆ.10ರಂದು ನಡೆಯಲಿರುವ 19ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಹಾಗೂ ಸ್ಫೂರ್ತಿ ಯುವ ಸಂಸ್ಥೆಗಳ 34ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯು ಇತ್ತೀಚೆಗೆ ಶನೀಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸೇರ ಕೋಟಿಯಪ್ಪ ಪೂಜಾರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಸ್ಫೂರ್ತಿ ಯುವ ಸಂಸ್ಥೆಗಳ ಗೌರವ ಸಲಹೆಗಾರ ಅಮರನಾಥ ಪಿ.ಬಿ., ಒಡಿಯೂರು ಗ್ರಾಮ ವಿಕಾಸದ ಸೇವಾ ಪ್ರತಿನಿಧಿ ಸುನಂದಾ ಶೆಟ್ಟಿ, ಬನ್ನೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗುರುಪ್ರಸಾದ್ , ಸ್ಪೂರ್ತಿ ಯುವ ಸಂಸ್ಥೆಯ ಸದಸ್ಯರು, ಕುಣಿತ ಭಜನೆ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಫೂರ್ತಿ ಯುವ ಸಂಸ್ಥೆಗಳ ಸಂಚಾಲಕ ದಿನೇಶ್ ಸಾಲಿಯನ್ ಕಾರ್ಯಕ್ರಮ ನಿರೂಪಿಸಿದರು. ಸ್ಪೂರ್ತಿ ಬಾಲ ಸಭಾದ ಉಪಾಧ್ಯಕ್ಷೆ ಶಬರಿ ಸ್ವಾಗತಿಸಿ, ಯುವಕ ಮಂಡಲದ ಅಧ್ಯಕ್ಷ ಸೂರ್ಯಕೋಟ್ಯಾನ್ ವಂದಿಸಿದರು.

LEAVE A REPLY

Please enter your comment!
Please enter your name here