ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೌಂದರ್ಯ ಮಂಜಪ್ಪ ಭೇಟಿ

0

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವರ್ಷಾವಧಿ ಜಾತ್ರೋತ್ಸವದ ಎರಡನೇ ದಿನವಾದ ಪಂಚಮಿ ಉತ್ಸವದಂದು ಬೆಂಗಳೂರಿನ ಸೌಂದರ್ಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರು, ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ಸೌಂದರ್ಯ ಮಂಜಪ್ಪರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರು ವಿಶೇಷ ಪ್ರಾರ್ಥನೆ‌ ಸಲ್ಲಿಸಿ ಪ್ರಸಾದ ನೀಡಿದರು. ಕ್ಷೇತ್ರದ ಪರವಾಗಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಪದಾಧಿಕಾರಿ ಪ್ರಕಾಶ್ ಕೆ.ಎಸ್. ಉರಿಮಜಲು, ಸುರೇಶ್ ಕೆ. ಎಸ್. ಮುಕ್ಕುಡ, ಪ್ರಮುಖರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಮೈಸೂರಿನ ಎಸ್.ಎಲ್.ವಿ.ಬುಕ್ಸ್ ಇಂಡಿಯಾ ಪ್ರೈವೇಟ್ ಲಿ. ನ ಆಡಳಿತ ನಿರ್ದೇಶಕ ದಿವಾಕರ‌ದಾಸ್ ನೇರ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here